ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು: ಡಿಸಿಎಂ ಕಾರಜೋಳ

ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ವಿಜಯಪುರ: ಬೇಸಿಗೆ ಸಮೀಪಿಸುತ್ತಿದ್ದು, ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಅಣೆಕಟ್ಟಿಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ನೀರಿನ‌ ಮಟ್ಟವನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಆಲಮಟ್ಟಿ ಅಣೆಕಟ್ಟೆಯಲ್ಲಿ 107ಟಿಎಂಸಿ ಹಾಗೂ ನಾರಾಯಣ ಪುರ ಜಲಾಶಯದಲ್ಲಿ 30 ಟಿಎಂಸಿ‌ ನೀರು ಸಂಗ್ರಹವಾಗಿದೆ. ಈ ನೀರನ್ನು ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು.

ನೀರಾವರಿ ಸಲಹಾ ಸಮಿತಿಯಲ್ಲಿ ತೀರ್ಮಾನಿಸಿದಂತೆ ವಾರ ಬಂದಿಯಂತೆ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ಉದ್ದೇಶಕ್ಕೆ ನೀರು ಬಿಡುಗಡೆ ಮಾಡಬೇಕು. ನೀರು ಪೋಲಾಗಬಾರದು ಮತ್ತು ದುರುಪಯೋಗ ವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಿನಿಂದಲೇ ಎಚ್ಚರಿಕೆ ವಹಿಸಿದರೆ ಬೇಸಿಗೆಯಲ್ಲಿ ನೀರಿನ ಅಭಾವವನ್ನು ನಿಭಾಯಿಸಬಹುದು. ಈ ನಿಟ್ಟಿನಲ್ಲಿ‌ ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com