ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಎತ್ತಿನ ಗಾಡಿಗೆ ಗೂಡ್ಸ್ ಢಿಕ್ಕಿ, ಮೂವರ ಸಾವು

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಎತ್ತಿನ ಗಾಡಿಗೆ ಗೂಡ್ಸ್ ಢಿಕ್ಕಿ
ಎತ್ತಿನ ಗಾಡಿಗೆ ಗೂಡ್ಸ್ ಢಿಕ್ಕಿ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರಗಿ ಜಿಲ್ಲೆಯ ಮಹಾಗಾಂವ್ ಗ್ರಾಮದ ಕಮಲಾಪುರ ತಾಲ್ಲೂಕಿನ ಕಟ್ಟಳ್ಳಿ ಕ್ರಾಸ್ ಬಳಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಎತ್ತಿನ ಗಾಡಿಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ಜಗದೇವಿ ರಾಠೋಡ್ (32 ವರ್ಷ), ದಶರಥ್ (32 ವರ್ಷ), ಸವಿತಾ ಚೌಹಾಣ್ (40 ವರ್ಷ) ಎಂದು ಗುರುತಿಸಲಾಗಿದೆ. 

ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಮೃತರು ಜಮೀನಿನಿಂದ ಮನೆಗೆ ಎತ್ತಿನಗಾಡಿಯಲ್ಲಿ ವಾಪಸ್ಸಾಗುತ್ತಿದ್ದಾಗ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಬಂಡಿಯಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ಮೂರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಗೂಡ್ಸ್ ಗಾಡಿಯ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com