ಆಪರೇಷನ್ ನಡೆದಾಗ ಕಡೆಯ ಆಸೆ ತೋಡಿಕೊಂಡಿದ್ದ ಶ್ರೀಗಳು : ಯತಿಗಳ ಕೊನೆಯಾಸೆ ಏನು?

ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.
ಪೇಜಾವರ ಶ್ರೀಗಳು
ಪೇಜಾವರ ಶ್ರೀಗಳು

ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. 

ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com