ಬೇನಾಮಿ ಆಸ್ತಿ ಪ್ರಕರಣ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು ನಾಲ್ಕು ಮಂದಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣವರ್ಗಾವಣೆ ಪ್ರಕರಣದ ಆರೋಪಿಗಳಾದ ಡಿಕೆಶಿ ಆಪ್ತರು ಎಂದು ಹೇಳಲಾಗುತ್ತಿರುವ ಸಚಿನ್ ನಾರಾಯಣ್, ಸುನೀಲ್ ಶರ್ಮ, ಆಂಜನೇಯ ಮತ್ತು ರಾಜೇಂದ್ರ ಎಂಬುವರಿಗೆ ಇಡಿ ಸಮನ್ಸ್ ಜಾರಿ ಮಾಡಿ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ಕೂಡ ನೀಡಿದೆ.