ಪೊಲೀಸ್ ಪೇದೆ ಜೀವ ರಕ್ಷಿಸಿದ ಬಿಎಂಟಿಸಿ ಚಾಲಕ- ನಿರ್ವಾಹಕರಿಗೆ ಪರೋಪಕಾರಿ ಪ್ರಶಸ್ತಿ!

ಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಸಕಾಲಕ್ಕೆ ಆಸ್ಪತೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ವೈ.ಎನ್‌. ಗಂಗಾಧರ್‌ ಮತ್ತು ...
ಗಂಗಾಧರ್ ಮತ್ತು ಶ್ರೀನಿವಾಸ್ ಅವರಿಗೆ ಪರೋಪಕಾರಿ ಪ್ರಶಸ್ತಿ
ಗಂಗಾಧರ್ ಮತ್ತು ಶ್ರೀನಿವಾಸ್ ಅವರಿಗೆ ಪರೋಪಕಾರಿ ಪ್ರಶಸ್ತಿ
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಸಕಾಲಕ್ಕೆ ಆಸ್ಪತೆಗೆ ಸೇರಿಸಿ ಮಾನವೀಯತೆ ಮೆರೆದ ಬಿಎಂಟಿಸಿ ಚಾಲಕ ವೈ.ಎನ್‌. ಗಂಗಾಧರ್‌ ಮತ್ತು ನಿರ್ವಾಹಕ ಟಿ. ಶ್ರೀನಿವಾಸ್‌ ಅವರನ್ನು ಇಡೀ ರಾಜ್ಯದ ಜನತೆ ಪ್ರಶಂಸಿತ್ತು, 
ಹಾಸ್‌ಮ್ಯಾಟ್‌ ಆಸ್ಪತ್ರೆ ಈ ವರ್ಷದ ಹಾಸ್‌ ಮ್ಯಾಟ್‌ ಪರೋಪಕಾರಿ ಪ್ರಶಸ್ತಿ ಪ್ರಕಟಿಸಿದ್ದು ಅಪಘಾತದಲ್ಲಿ ಮಾನವೀಯತೆ ಮೆರೆದ ಬಿಎಂಟಿಸಿ ಬಸ್‌ ಚಾಲಕ ವೈ.ಎನ್‌.ಗಂಗಾಧರ್‌ ಮತ್ತು ನಿರ್ವಾಹಕ ಟಿ.ಶ್ರೀನಿವಾಸ್‌ ಉತ್ತಮ ಪರೋಪಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. 
ಕಳೆದ ಡಿ. 29ರ ರಾತ್ರಿ  ಕೆಲಸ ಮುಗಿಸಿಕೊಂಡು ಹೋಗುವಾಗ ಯಲಹಂಕ - ನೆಲಮಂಗಲ ಮಾರ್ಗದಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಪೇದೆ ಸಿದ್ದರಾಜು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ರಸ್ತೆ ಬದಿ ರಕ್ತದ ಮಡುವಿನಲ್ಲಿ ನೋವಿನಿಂದ ನರಳುತ್ತಿದ್ದ ಅವರನ್ನು ಜನರು ನೋಡಿಕೊಂಡು ಹೋಗುತ್ತಿದ್ದರು ಆದರೆ ಯಾರೂ ನೆರವಿಗೆ ಧಾವಿಸಲಿಲ್ಲ.  ಎಲ್ಲರೂ ವಿಡಿಯೋ ಮಾಡಿಕೊಳ್ಳುತ್ತಿದ್ದರು, 
ಈ  ಸಮಯದಲ್ಲಿ ರೂಟ್‌ ನಂ. 407 ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗಂಗಾಧರ್‌ ಮತ್ತು ಶ್ರೀನಿವಾಸ್‌ ಸಿದ್ದರಾಜು ಸ್ಥಿತಿ ನೋಡಿ, ಬಸ್‌ನಲ್ಲಿಯೇ ಸಿದ್ದರಾಜು ಅವರನ್ನು ಆಸ್ಪತ್ರೆಗೆ ಕರೆದು ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com