ಬಸವರಾಜನನ್ನು ಪರೀಕ್ಷಿಸಿದ ವೈದ್ಯರು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಶಿಕ್ಷಕರಿಗೆ ತಿಳಿಸಿದ್ದು ಆ ಬಳಿಕ ಶಿಕ್ಷಕರು ಈ ವಿಷಯವನ್ನು ಬಾಲಕನ ಪೋಷಕರಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ಪೋಷಕರು ಬಿಇಒ ಅಧಿಕಾರಿಗೆ ದೂರು ನೀಡಿದ್ದು ಈ ದೂರಿನನ್ವಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದು ತನಿಖೆಗೆ ಆಗ್ರಹಿಸಿದ್ದಾರೆ.