ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!

ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬಾಗಲಕೋಟೆ: ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. 
ಜನವರಿ 23ರಂದ ಈ ಪ್ರಕರಣ ನಡೆದಿದ್ದು ಶಾಲೆಯ ಶಿಕ್ಷಕರು 9 ವರ್ಷದ ವಿದ್ಯಾರ್ಥಿ ಬಸವರಾಜು ಪಿ ಎಂಬಾತನಿಗೆ ಶಾಲೆಯ ಸಮಯದಲ್ಲಿ ಶೌಚಾಲಯವನ್ನು ಶುಚಿಗೊಳಿಸುವಂತೆ ಹೇಳಿದ್ದರು. ಅಂತೆ ಬಸವರಾಜು ಪಂಪ್ ಅನ್ನು ಆಫ್ ಮಾಡುವಾಗ ಕರೆಂಟ್ ಶಾಕ್ ಹೊಡೆದಿತ್ತು. ಕೂಡಲೇ ವಿದ್ಯಾರ್ಥಿಯನ್ನು ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.
ಬಸವರಾಜನನ್ನು ಪರೀಕ್ಷಿಸಿದ ವೈದ್ಯರು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಶಿಕ್ಷಕರಿಗೆ ತಿಳಿಸಿದ್ದು ಆ ಬಳಿಕ ಶಿಕ್ಷಕರು ಈ ವಿಷಯವನ್ನು ಬಾಲಕನ ಪೋಷಕರಿಗೆ ತಿಳಿಸಿದ್ದರು. ಇದೇ ವಿಚಾರವಾಗಿ ಪೋಷಕರು ಬಿಇಒ ಅಧಿಕಾರಿಗೆ ದೂರು ನೀಡಿದ್ದು ಈ ದೂರಿನನ್ವಯ ಮೂವರು ಶಿಕ್ಷಕರನ್ನು ಅಮಾನತುಗೊಳಿಸಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com