ಬೆಂಗಳೂರು: ಅತಿಯಾದ ವೇಗ ಹಾಗೂ ಚಾಲಕನ ನಿರ್ಲಕ್ಷದ ಕಾರಣ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ತಾಳೆಕೆರೆ ಹ್ಯಾಂಡ್ ಪೋಸ್ಟ್ ಸಮೀಪ ನಡೆದ ಘಟನೆಯಲ್ಲಿ ಇಂಡಿಕಾ ಕಾರಿನಲ್ಲಿದ್ದ , ಜಗದೀಶ್ (55), ಜೈಶಂಕರ್ (45) ಹಾಗೂ ಸುರೇಶ್ (24) ಎನ್ನುವವರು ಮೃತಪಟ್ಟಿದ್ದಾರೆ. ಇದೇ ವೇಳೆ ಲಾನ್ಮಾನ್ ಯಾದವ್ ಎನ್ನುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಉತ್ತರ ಪ್ರದೇಶ್ ಮೂಲದವರಾಗಿದ್ದು ಆರ್.ಟಿ. ನಗರದಲ್ಲಿ ವಾಸವಿದ್ದರು. ಇವರು ಧರ್ಮಸ್ಥಳಕ್ಕೆ ಹೋಗಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಈ ದುರ್ಘಟನೆ ನಡೆದಿದೆ.