ಬೆಂಗಳೂರು: ಜಮೀನಿಗಾಗಿ ನಡೆದ ಜಗಳ ತಾರಕಕ್ಕೇರಿ ಅಪ್ಪ-ಮಗನ ಜೋಡಿ ಕೊಲೆಯೊಡನೆ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನ ಹೊರವಲಯದ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆಯ ಮುತ್ತಕದಹಳ್ಳಿಯಲ್ಲಿ ನಡೆದ ಕೃತ್ಯದಲ್ಲಿ ನಾರಾಯಣರೆಡ್ಡಿ (60) ಮತ್ತು ಇವರ ಪುತ್ರ ಲಿಂಗಾರೆಡ್ಡಿ (33) ಹತ್ಯೆಯಾಗಿದ್ದಾರೆ. ಮುತ್ತುಕದಹಳ್ಳಿಯ ಬಾಬು (35) ಎಂಬಾತನೇ ಆರೋಪಿಯಾಗಿದ್ದು ಹತ್ಯೆ ನಡೆಸಿದ ಬಳಿಕ ಆರೋಪಿ ತಾನೇ ಪೋಲೀಸರಿಗೆ ಶರಣಾಗಿದ್ದಾನೆ.
ಘಟನೆ ವಿವರ
ಮುತ್ತಕದಹಳ್ಳಿಯಲ್ಲಿ ನಾರಾಯಣರೆಡ್ಡಿ ತಮ್ಮ ಜಮೀನನ್ನು ಆರೋಪಿ ಬಾಬುವಿಗೆ ನೀಡಿದ್ದರು. ಆದರೆ ಜಮೀನು ನೀಡುವ ಕುರಿತು ಮಾತಿನ ಒಡಂಬಡಿಕೆ ವಿನಾ ನೊಂದಣಿ ಆಗಿರಲಿಲ್ಲ. ಈ ವಿಚಾರ ಅವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಹಲವು ವೇಳೆ ಮಧ್ಯಸ್ಥದಾರರ ಸಂಧಾನದಿಂದ ಜಗಳ ಪರಿಹಾರ ಕಂಡಿತ್ತು.