ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಮುತ್ತಪ್ಪ ಬಿರೋಜಿ (9) ಎಂಬ ಬಾಲಕ ನಾಲ್ಕು ದಿನದ ಹಿಂದೆ ಪೆನ್ನಿನ ಕ್ಯಾಪ್ ನುಂಗಿದ್ದ. ಈತನನ್ನು ನಾನಾ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದ ಪೋಷಕರು ಮಂಗಳವಾರ ಸಂಜೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾವನ್ನಪ್ಪಿದ್ದಾನೆ.