ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಭೌತಿಕವಾಗಿ ನಮ್ಮನ್ನು ಅಗಲಿರಬಹುದು, ಆದರೆ, ಅವರು ಕನ್ನಡಿಗರ ಮನೆ, ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅದರಲ್ಲೂ ಸಕ್ಕರೆ ನಾಡಿನ ಅಚ್ಚು ಮೆಚ್ಚಿನ ಅಣ್ಣನಾಗಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.
ಅಂಬರೀಷ್ ಅಭಿಮಾನಿಗಳು ವಿಶಿಷ್ಠ ರೀತಿಯಲ್ಲಿ ತಮ್ಮ ಅಭಿಮಾನ ಮೆರೆಯುತ್ತಿದ್ದು, ಭತ್ತದ ಪೈರಿನಲ್ಲೂ ಮತ್ತೆ ಹುಟ್ಟಿ ಬಾ ಅಂಬರೀಷ್ ಅಣ್ಣ ಎಂದು ಸಾರಿ ಹೇಳುತ್ತಿದೆ.
ತಾಲೂಕಿನ ಮೊತ್ತಹಳ್ಳಿ ಗ್ರಾಮದ ಎಂ.ಪಿ. ಹರ್ಷಿತ್, ರಾಜು ಕಾಳಪ್ಪ, ಎಂ. ಜೆ. ದಿಲೀಪ್ ಕುಮಾರ್ ಸಹೋದರರು ತಮ್ಮ ಗದ್ದೆಯಲ್ಲಿ ಭತ್ತದ ಬಿತ್ತನೆ ಬೀಜ ಬಿತ್ತುವ ಮೂಲಕವೇ ಅಂಬರೀಷ್ ಮೇಲಿನ ಅಭಿಮಾನ ಮೆರೆದಿದ್ದಾರೆ. ಇವರು ಅಂಬರೀಷ್ ಪುಣ್ಯತಿಥಿಯ ದಿನ ಕೇಶಮುಂಡನ ಮಾಡಿಸಿಕೊಂಡು ಶ್ರದ್ದಾಂಜಲಿ ಸಲ್ಲಿಸಿದ್ದರು.
Advertisement