ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಲ್ಲಿ ಬಿಜೆಪಿಯ ಮೂವರು ಹಾಗೂ ಜೆಡಿಎಸ್ ನ ಓರ್ವ ಮುಖಂಡರ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ್, ಡಾ. ವಿಶ್ವನಾಥ್, ಮಾಜಿ ಶಾಸಕ ಸಿಪಿ ಯೋಗೀಶ್ವರ್ ಹಾಗೂ ಜೆಡಿಎಸ್ ನ ಶಾಸಕ ಕೆ. ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಿಸಲಾಗಿದೆ. ಮೊದಲ ಮೂವರು ಲಂಚ ನೀಡಿದ್ದಾರೆಂದು ದೂರು ದಾಖಲಾಗಿದ್ದರೆ ಶ್ರೀನಿವಾಸ್ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿದ್ದಾರೆ.