ಮೈಸೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಜೆಡಿಎಸ್ ಶಾಸಕರೊಡನೆ ಮಾತನಾಡಿ ಅವರನ್ನು ಬಿಜೆಪಿಗೆ ಸೆಳೆಯಲು ಯತ್ನಿಸಿದ್ದರೆನ್ನಲಾದ ಆಡಿಯೋ ಟೇಪ್ ಕರ್ನಾಟಕ ಶಾಸನ ಸಭೆಯಲ್ಲಿ ಸದ್ದು ಮಾಡುತ್ತಿರುವಾಗಲೇ ಮೈಸೂರು ತಾಲೂಕಿನ ಸ್ಥಾನಿಕ ತಹಶೀಲ್ದಾರ್ ಟಿ. ರಮೇಶ್ ಬಾಬು ಹಾಗೂ ಇನ್ನೊಬ್ಬ ಅಧಿಕಾರಿ ನಡುವೆ ನಡೆದ ಟೆಲಿಫೋನ್ ಸಂಭಾಷಣೆಯೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದೆ.