ಕರ್ನಾಟಕ ರಾಜ್ಯ ಬ್ರಾಹ್ಮಣರ ಕಲ್ಯಾಣ ನಿಧಿಗೆ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ 25 ಕೋಟಿ ರು ಅನುದಾನ ನೀಡಿದೆ. ವಿದ್ಯಾರ್ಥಿ ವೇತನ, ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿಯಲ್ಲಿ ಸಾಲ, ವಿಧವಾ ವೇತನ, ಹಿರಿಯರಿಗೆ ವೃದ್ದಾಪ್ಯ ವೇತನ, ವಿಕಲ ಚೇತನರಿಗೆ ಅನುದಾನ, ವೃದ್ಧಾಶ್ರಮ, ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ನೀಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.