ಕಳೆದ 6 ತಿಂಗಳ ಹಿಂದೆ ವಿವಾಹವಾಗಿದ್ದ ಯೋಧ ಗುರು, ರಜೆಗಾಗಿ ಕಳೆದ ವಾರ ಊರಿಗೆ ಬಂದಿದ್ದರು. ರಜೆ ಮುಗಿಸಿಕೊಂಡು ವಾಪಸ್ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬೆನ್ನಲ್ಲೇ ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆಯ ಗುರು 2011 ರಲ್ಲಿ ಸಿಆರ್ ಪಿಎಫ್ ಗೆ ಸೇರಿದ್ದರು.