ಕಾವೇರಿ ಹೋರಾಟಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ರೈತರ ಮೇಲಿದ್ದ ಕೇಸ್ ವಾಪಸ್

ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ....
ಡಿ.ಸಿ ತಮ್ಮಣ್ಣ
ಡಿ.ಸಿ ತಮ್ಮಣ್ಣ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹೋರಾಟದ ಸಂದರ್ಭದಲ್ಲಿ ರೈತರ ಮೇಲೆ ಹಾಕಿದ್ದ ಕೇಸುಗಳ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮದ್ದೂರಿನ ಕೆಎಂ ದೊಡ್ಡಿಯಲ್ಲಿ ಮಾತನಾಡಿದ್ದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಾವೇರಿ ಹೋರಾಟದ ಸಮಯದಲ್ಲಿ ರೈತರ ಮೇಲೆ ದಾಖಲಾಗಿದ್ದ ಶೇ.95 ರಷ್ಟು ಕೇಸುಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದ್ದಾರೆ. 
ಈಗಾಗಲೇ ರೈತರ ಮೇಲೆ ಹೂಡಿರುವ ಕೇಸುಗಳ ಬಗ್ಗೆ ತಾಲೂಕುವಾರು ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೋರಾಟದ ಸಂದರ್ಭದಲ್ಲಿ ಸರ್ಕಾರದ ಆಸ್ತಿ-ಪಾಸ್ತಿ ನಷ್ಟ ಮಾಡಿರುವ ಕೇಸುಗಳು ವಾಪಸ್ ಪಡೆಯಲಿದ್ದೇವೆ. ಆದರೆ ಖಾಸಗಿ ಆಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಕ್ಯಾಮೆರಾ, ಕಾರುಗಳ ಜಖಂ, ಅಂಗಡಿ, ಮುಗ್ಗಟ್ಟು ಮೇಲೆ ಕಲ್ಲು ತೂರಾಟ, ಪಾಂಡವಪುರ ಜಡ್ಜ್ ಮನೆ ಮೇಲೆ ದಾಳಿ ಸೇರಿದಂತೆ ಖಾಸಗಿಯಾಗಿ ನೀಡಿರುವ ಕೇಸುಗಳು ಕೋರ್ಟ್ ನಲ್ಲೇ ಇತ್ಯರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಈಗಾಗಲೇ ಹೋರಾಟಗಾರರ ಪಟ್ಟಿ ಕಾರ್ಯ ಭರದಿಂದ ಸಾಗಿದ್ದು, ಇದೇ ತಿಂಗಳು 27 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡ್ಯಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಅಂದೇ ಕಾವೇರಿ ಹೋರಾಗಾರರ ಮೇಲಿನ ಕೇಸ್ ವಾಪಸ್ ಪಡೆಯುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com