ಕಳ್ಳತನವಾಗಿದ್ದ ಚಿನ್ನವನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದ ನಗರ ಪೊಲೀಸರು, ಜನತೆಗೆ ಸರ್ ಪ್ರೈಸ್ ಆಗಿ ನೀಡಬೇಕೆಂಬ ಕಾರಣಕ್ಕೆ ತಮ್ಮ ಬಳಿಯೇ ಇಟ್ಟುಕೊಂಡು ಸುಮ್ಮನಿದ್ದರು. ಇದರಂತೆ ನಿನ್ನೆ ಮಧ್ಯರಾತ್ರಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಬೆಂಗಳೂರು ಪಶ್ಚಿಮ ವಲಯದ ಡಿಸಿಪಿ ರವಿ ಚನ್ನಣ್ಣನವರ್, ಡಿಸಿಪಿ ಅಣ್ಣಾಮಲೈ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಿನ್ನ ಕಳೆದುಕೊಂಡವರ ಮನೆಗೆ ತೆರಳಿ ಬಂಗಾರವನ್ನು ವಾಪಸ್ ನೀಡಿದ್ದಾರೆ. ಇದರಿಂದ ಹೊಸ ವರ್ಷದ ದಿನದಂದು ಜನತೆ ಸಂತಸ ಪಟ್ಟಿದ್ದಾರೆ. ಕಳೆದು ಹೋದ ವಸ್ತುಗಳನ್ನು ವಾಪಸ್ ನೀಡಿದ್ದಕ್ಕೆ ಪೊಲೀಸರಿಗೆ ಜನತೆ ಕೂಡ ಧನ್ಯವಾದಗಳನ್ನು ಹೇಳಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ವ್ಯಕ್ತವಾಗತೊಡಗಿವೆ.