ಭಗವಾನ್ ಅವರು ಬರೆದಿರುವ ಪುಸ್ತಕದ ವಿರುದ್ಧ ಬಲಪಂಥೀಯ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದ್ದು, ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ. ಮೈಸೂರಿನ ಹಿಂದೂ ಜಾಗೃತಿ ವೇದಿಕೆ ಆಧ್ಯಕ್ಷ ಜಗದೀಶ್ ಹೆಬ್ಬಾರ್ ಅವರು ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಪ್ರಕರಣ ಸಂಬಂಧ ಮೌನ ತಾಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿರುದ್ಧ ರಾಜ್ಯ ಬಿಜೆಪಿ ತೀವ್ರ ಕಿಡಿಕಾರಿದೆ.
ಬಿಜೆಪಿ ನಾಯಕ ಹಾಗೂ ಶಾಸಕ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ರಾಜ್ಯ ಸರ್ಕಾರಕ್ಕೆ ಇದೀಗ ಎರಡು ಆಯ್ಕೆಗಳಷ್ಟೇ ಇದೆ, ಭಗವಾನ್ ಅವರನ್ನು ಜೈಲಿಗಟ್ಟಬೇಕು ಇಲ್ಲವೇ ಮಾನಸಿಕ ಅಸ್ವಸ್ಥರ ಆಸ್ಪತ್ರೆಗೆ ದಾಖಲು ಮಾಡಬೇಕೆಂದು ಹೇಳಿದ್ದಾರೆ.