ಬೆಂಗಳೂರು: ವಕೀಲೆ ಆತ್ಮಹತ್ಯೆ, ಏಳು ಮಂದಿ ವಿರುದ್ಧ ಕೇಸು ದಾಖಲು

ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ.

ಮೃತ ವಕೀಲೆಯನ್ನು ಧರಣಿ ಎಂದು ಗುರುತಿಸಲಾಗಿದೆ. ಈಕೆ ಮಹದೇವಪುರ ಬಳಿ ನಾರಾಯಣಪರದಲ್ಲಿ ತಾಯಿ ಜೊತೆ ನೆಲೆಸಿದ್ದರು. ಆಕೆಯ ಮನೆ ಮುಂದಿನ ಜಾಗವೊಂದಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಸುರೇಶ್ ಮತ್ತು ನೆರೆಮನೆಯವರು ಕಿರುಕುಳ ನೀಡುತ್ತಿದ್ದು ಅದನ್ನು ತಾಳಲಾರದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಸೆಪ್ಟೆಂಬರ್ 9ರಂದು ಕಿರುಕುಳಕ್ಕೆ ಸಂಬಂಧಪಟ್ಟಂತೆ ಧರಣಿ ತಾಯಿ ಪೊಲೀಸರಿಗೆ ದೂರು ಸಹ ನೀಡಿದ್ದರು, ಆದರೂ ಕೂಡ ಕಿರುಕುಳ ಮುಂದುವರಿದಿತ್ತು.
ಪ್ರಕರಣ ಸಂಬಂಧ ಕಾರ್ಪೊರೇಟರ್ ಸೇರಿದಂತೆ ಏಳು ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com