ಬೆಂಗಳೂರು: ರಾಜ್ಯದ ಒಟ್ಟು 176 ತಾಲೂಕುಗಳಲ್ಲಿ 156 ತಾಲೂಕುಗಳು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಇನ್ನೂ ಬರಪೀಡಿತ ಪ್ರದೇಶಗಳಲ್ಲಿ ಸರ್ವೆ ನಡೆಸಿ, ಉಂಟಾಗಿರುವ ನಷ್ಟದ ಪ್ರಮಾಣವನ್ನು ವರದಿ ಮೂಲಕ ಸಲ್ಲಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಿರುವ ಸರ್ಕಾರ. ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದೆ.
ಬರ ಪರಿಹಾರ ಕಾಮಗಾರಿಗೆ ರಾಜ್ಯ ಹಾಗೂ ಕೇಂದ್ರದ ವಿಪತ್ತು ಕಾರ್ಯಾಚರಣೆ ಅನುದಾನ ಬಳಸಿಕೊಳ್ಳುವಂತೆ ಸಚಿವ ಆರ್ ವಿ ದೇಶಪಾಂಡೆ ಅವರನ್ನೊಳಗೊಂಡ ಸಂಪುಟ ಉಪ ಸಮಿತಿ ಸೂಚಿಸಿದೆ.