ಧಾರವಾಡ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಶನಿವಾರ ನಿರ್ಧರಿಸಲಾಗಿದೆ.
ಈ ಸಂಬಂಧ ಇಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಬಳಿಗಾರ್ ಅವರು, ಕಲಬುರ್ಗಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸುವ ಪ್ರಸ್ತಾವಕ್ಕೆ ಸರ್ವಾನುಮತದ ಅನುಮೋದನೆ ನೀಡಲಾಯಿತು ಎಂದರು.
1987ರ ನಂತರ ಕಲಬುರ್ಗಿಗೆ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 31 ವರ್ಷಗಳ ನಂತರ ಅಕ್ಷರ ಜಾತ್ರೆಗೆ ಶರಣರ ನಾಡು ಸಜ್ಜಾಗಿದೆ.