2018ರ ಜುಲೈ 24ರಂದು ಕೆಸಿ ವ್ಯಾಲಿ ನೀರನ್ನು ಸರಬರಾಜು ಮಾಡಲು ರಾಜ್ಯ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದಾಗಿ ಎರಡು ತಿಂಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ತೆರವುಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರಕ್ಕೆ ವ್ಯಾಲಿ ನೀರನ್ನು ಹರಿಸಲು ಅನುಮತಿಸಿತ್ತು.ಇದನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.