ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆನೀಡಿರುವ ಭಾರತ ಬಂದ್ ಬುಧವಾರ ಕೂಡ ಮುಂದುವರಿದಿದ್ದರೂ ನಗರದ ಬಹುತೇಕ ಶಾಲಾ ಕಾಲೇಜುಗಳು ಇಂದು ಎಂದಿನಂತೆ ತೆರೆದಿವೆ.
ಇಂದು ಶಾಲಾ ಕಾಲೇಜುಗಳಿಗೆ ಅಧಿಕೃತ ಸರ್ಕಾರಿ ರಜೆ ಘೋಷಿಸಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ ಎಂ ವಿಜಯ್ ಶಂಕರ್ ತಿಳಿಸಿದ್ದಾರೆ.ಆದರೆ ಕೆಲವು ಖಾಸಗಿ ಶಾಲೆಗಳು ನಿನ್ನೆ ಮತ್ತು ಇಂದು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಿವೆ.
ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ದಾವಣಗೆರೆ ಮತ್ತು ತುಮಕೂರು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಮುಂದೂಡಿವೆ. ಮುಂದಿನ ಪರೀಕ್ಷಾ ದಿನಾಂಕಕ್ಕೆ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ವೀಕ್ಷಿಸಬಹುದು.
Advertisement