ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ ಅವರು, ಆಂಗ್ಲ ಮಾಧ್ಯಮ ಕುರಿತ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಾವು ಬದ್ಧವಾಗಿದ್ದು, ನಿರ್ಣಯವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಂತೆಯೇ ತಾವು ಯಾವುದೇ ಕಾರಣಕ್ಕೂ ಮಾತೃಭಾಷೆ ಕನ್ನಡವನ್ನು ಕಡೆಗಣಿಸುವುದಿಲ್ಲ. ಮಾತೃಭಾಷೆಯೊಂದಿಗೆ ಇಂಗ್ಲಿಷ್ ಶಿಕ್ಷಣ ಆರಂಭವಾಗುತ್ತದೆ. ಆಧುನಿಕ ಸಮಾಜದಲ್ಲಿ ನಮ್ಮ ಮಕ್ಕಳೂ ಕೂಡ ಇಂಗ್ಲಿಷ್ ಶಿಕ್ಷಣ ಪಡೆಯುವುದು ಅನಿವಾರ್ಯ. ಹೀಗಾಗಿ ಇಂಗ್ಲಿಷ್ ಶಿಕ್ಷಣದ ಕುರಿತು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.