ಅಮಾನವೀಯ ಘಟನೆ: ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ವಿಷ ಕೊಟ್ಟು ಕೊಂದ ಪಾಪಿ ತಂದೆ!

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ಚಿಕಿತ್ಸೆ ಕೊಡಿಸುವುದನ್ನು ಬಿಟ್ಟು ಆಕೆಗೆ ವಿಷ ಕೊಟ್ಟು ತಂದೆಯೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹೆಮ್ಮಾಡಿಯ ಕುಂಬ್ರಿ ಮಜರೆಯಲ್ಲಿ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶಿರಸಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ಚಿಕಿತ್ಸೆ ಕೊಡಿಸುವುದನ್ನು ಬಿಟ್ಟು ಆಕೆಗೆ ವಿಷ ಕೊಟ್ಟು ತಂದೆಯೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹೆಮ್ಮಾಡಿಯ ಕುಂಬ್ರಿ ಮಜರೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 9 ವರ್ಷದ ನಯನಾ ನಾಗರಾಜ ಪೂಜಾರಿ ಎಂದು ಗುರುತಿಸಲಾಗಿದೆ. ತಂದೆ ನಾಗರಾಜ್ ಪೂಜಾರಿ ಮಗಳಿಗೆ ವಿಷ ನೀಡಿ ಅಥವಾ ಹಲ್ಲೆ ಮಾಡಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪತ್ನಿ ಮನೆಯಲ್ಲಿ ಇಲ್ಲದಾಗ ನಾಗರಾಜ ಪೂಜಾರಿ ಈ ಕೃತ್ಯ ಎಸಗಿದ್ದು ಸಂಬಂಧಿಕರು ಬಂದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com