ಜಯದೇವ ಆಸ್ಪತ್ರೆ ವೈದ್ಯರ ತಂಡದಿಂದ ಇಂದು ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ

ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದ ಬೆನ್ನಲ್ಲೇ ಅವರ ಬಾವ ಹಾಗೂ ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಎನ್ ಮಂಜುನಾಥ್ ಅವರು ....
ಗಣ್ಯರಿಂದ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚರಾಣೆ
ಗಣ್ಯರಿಂದ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚರಾಣೆ
ತುಮಕೂರು: ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದ ಬೆನ್ನಲ್ಲೇ ಅವರ ಬಾವ ಹಾಗೂ ಜಯದೇವ ಆಸ್ಪತ್ರೆ ಮುಖ್ಯಸ್ಥ  ಡಾ. ಎನ್ ಮಂಜುನಾಥ್ ಅವರು ಇಂದು ಸಿದ್ದಗಂಗಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಶ್ರೀಗಳು ಐಸಿಯು ನಲ್ಲಿದ್ದಾರೆ  ಸ್ವಾಮೀಜಿಗಳ ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವೈದ್ಯರ ತಂಡವೊಂದನ್ನು ರಚಿಸಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ತಂಡ ಶುಕ್ರವಾರ ಸಿದ್ದಗಂಗಾ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಶ್ರೀಗಳ ತಪಾಸಣೆ ನಡೆಸಲಿದ್ದಾರೆ.
ಮಠದ ಕಿರಿಯ ಸ್ವಾಮೀಜಿಗಳಿಗೆ ಸಿಎಂ ಕುಮಾರಸ್ವಾಮಿ ಕರೆ ಮಾಡಿ, ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com