ಬೆಂಗಳೂರು: 52ನೇ ವಸಂತಕ್ಕೆ ಕಾಲಿಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ರಾಜಕೀಯ ನಾಯಕರು ಸೇರದಂತೆ ಅಭಿಮಾನಿಗಳು ಹಾಗೂ ಹಿತೈಷಿಗಳು ಶುಭಕೋರಿದ್ದಾರೆ.
ಈ ಮಧ್ಯೆ ರೆಡ್ಡಿ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ವಿಷಯ ಮತ್ತೆ ರಾಜಕೀಯಕ್ಕೆ ಮರಳುವ ಸೂಚನೆಯನ್ನು ನೀಡಿದೆ.
2019ರ ಹೊಸ ವರ್ಷದಲ್ಲಿ ನನ್ನ ಬದುಕಿನ ಪುಟದಲ್ಲಿ ಹೊಸ ಅಧ್ಯಾಯ ಬರೆಯಬೇಕೆಂದು ಬಯಸಿದ್ದೇನೆ ಎಂಬ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಫೇಸ್ಬುಕ್ ಫೋಸ್ಟ್ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
2004, ಡಿಸೆಂಬರ್ 31 ರಂದು ನನ್ನ ತಾಯಿಯವರು ಸ್ವರ್ಗಸ್ಥರಾದ ವರ್ಷದಿಂದ ನಾನು ಬಹಿರಂಗವಾಗಿ ಜನ್ಮದಿನ ಆಚರಿಸಿಕೊಳ್ಳದೆ ಕೇವಲ ದೇವರ ಪೂಜೆ, ಧ್ಯಾನ ಹಾಗೂ ಸಮಾಜದ ಸಮಸ್ತ ಜನರ ಹಿತಕ್ಕಾಗಿ ಭಗವಂತನಲ್ಲಿ ಪ್ರಾರ್ಥನೆ ಮಾಡುವ ಮೂಲಕ ಅತ್ಯಂತ ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.