ಮೂವರು ಗಂಡುಮಕ್ಕಳು ಹಾಗೂಪತ್ನಿಯನ್ನು ಅಗಲಿರುವ ನಾರಾಯಣ ರೆಡ್ಡಿ ಅವರ ಅಂತ್ಯ ಸಂಸ್ಕಾರ ಜ.14 ರಂದು ಮಧ್ಯಾಹ್ನ ನಡೆಯಲಿದೆ. ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ನಾರಾಯಣ ರೆಡ್ಡಿ, ಆ ನಂತರ ಲಾರಿ ಆಫೀಸಿನಲ್ಲಿ ಪ್ಯೂನ್ ಕೆಲಸಕ್ಕೆ ಸೇರಿಕೊಂಡು, ಅಲ್ಲಿ ಗುಮಾಸ್ತನಾಗಿ, ಮ್ಯಾನೇಜರ್ ಆಗಿ ಕೆಲಸಮಾಡಿದ್ದರು. ನಂತರ 1972 ರಲ್ಲಿ ಮರಳೇನಹಳ್ಳಿ ಬಳಿ ಜಮೀನು ಖರೀದಿಸಿ ಅಲ್ಲಿ ಸಾವಯವ ಕೃಷಿ ಪ್ರಾರಂಭಿಸಿದ್ದರು.