ಪ್ರಾರ್ಥನೆ ವೇಳೆ ಭಾವುಕರಾದ ತುಮಕೂರು ಸಿದ್ಧಗಂಗಾ ಕಿರಿಯ ಸ್ವಾಮೀಜಿ!

ನಡೆದಾಡುವ ದೇವರು ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನಡೆದಾಡುವ ದೇವರು ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. 
ಹಿರಿಯ ಶ್ರೀಗಳ ಅನಾರೋಗ್ಯದಿಂದ ಕಿರಿಯ ಸ್ವಾಮೀಜಿಗಳು ಕೊಂಚ ಕಂಗಾಲಾಗಿದ್ದಾರೆ. ಎಂದಿನಂತೆ ವಿದ್ಯಾರ್ಥಿಗಳ ಜೊತೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಿರಿಯ ಸ್ವಾಮೀಜಿಗಳು ಪ್ರಾರ್ಥನೆ ವೇಳೆ ಭಾವುಕರಾದಂತೆ ಕಂಡರು. 
ಅನಾರೋಗ್ಯದ ನಡುವೆಯೂ ಶ್ರೀಗಳು ವಿಭೂತಿ ಧಾರಣೆ ಮಾಡಿಕೊಳ್ಳುತ್ತಿರುವ ವಿಡಿಯೋವನ್ನು ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಶ್ರೀಗಳು ಶೀಘ್ರವೇ ಸಂಪೂರ್ಣ ಗುಣಮುಖರಾಗಲು ಪ್ರಾರ್ಥಿಸುತ್ತಿದ್ದಾರೆ. ಈ ಹಿಂದೆಯೂ ಆಸ್ಪತ್ರೆಗೆ ದಾಖಲಾದಾಗ ಶ್ರೀಗಳಿಗೆ ಅಲ್ಲಿಯೇ ಪೂಜಾ ಕೈಂಕರ್ಯಗಳಿಗೆ ವ್ಯವಸ್ಥೆ ಮಾಡಲಾಗುತ್ತಿತ್ತು. ಅನಾರೋಗ್ಯದ ನಡುವೆಯೂ ಸಹ ಶ್ರೀಗಳು ತಮ್ಮ ಎಂದಿನ ಪೂಜಾ ಕೈಂಕರ್ಯವನ್ನು ನಿರ್ವಹಿಸುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com