ಶ್ರೀಗಳ ಆರೋಗ್ಯದ ಕುರಿತು ಜ.17 ರಂದು ಬೆಳಿಗ್ಗೆ ಮಾಹಿತಿ ನೀಡಿರುವ ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ.ಪರಮೇಶ್, "ಚಿಕಿತ್ಸೆ ಮುಂದುವರೆದಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಸೋಂಕು ಕಡಿಮೆಯಾಗುತ್ತಿದೆ. ಆದರೆ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಯಾರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಹೇಳಿದ್ದಾರೆ.