ಸಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸೈನಿಕ ಸಿಕಂದರ್ ಮುಲ್ತಾನಿ ಪಕ್ಕದ ಗ್ರಾಮಕ್ಕೆ ಜಾತ್ರೆಗೆಂದು ಹೋದವರು ತಡರಾತ್ರಿ ಹಿಂದಿರುಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಪ್ರಯತ್ನಿಸಿದಾಗ ಬೈಕ್ ಟ್ರ್ಯಾಕ್ಟರ್ ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸಿಕಂದರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.