ಬಳಿಕ ಪಕ್ಷದ ಮುಖಂಡರನ್ನು ಎತ್ತಿ ಕಟ್ಟಿಕೊಂಡು ಅವರ ಕೈಗೆ ಸಿಕ್ಕ ಪಾಟ್ ಹಾಗೂ ದೊಣ್ಣೆಯಿಂದ ನನಗೆ ತಲೆಗೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಅಲ್ಲದೇ ನನ್ನ ತಲೆಯನ್ನು ಗೋಡೆಗೆ ಗುದ್ದಿ, ಪಿಸ್ತೂಲ್ ಕೊಡಿ. ಇವನನ್ನು ಇಲ್ಲೇ ಮುಗಿಸುತ್ತೇನೆ. ಇವನು ರಾಜಕೀಯವಾಗಿ ನನ್ನನ್ನು ಮುಗಿಸಲು ಹೊರಟಿದ್ದಾನೆ. ಇವನ ಪ್ರಾಣ ತೆಗೆದು ಇಲ್ಲೇ ಮುಗಿಸಿಬಿಡುತ್ತೇನೆ ಎಂದು ಗದರಿದ್ದಾರೆ. ಬಳಿಕ ನಾನು ಕೆಳಗೆ ಬಿದ್ದಾಗ ನನ್ನನ್ನು, 'ಸಾಯಿ ಸಾಯಿ' ಎಂದು ಹೇಳಿ ತುಳಿದು, ಕೈ ಮುಷ್ಠಿಕಟ್ಟಿ ಎದೆಗೆ ಹೊಡೆದಿದ್ದಾರೆ. ಇದರಿಂದ ಕಣ್ಣುಗಳು, ಮುಖ ಹಾಗೂ ದೇಹದ ಇತರೇ ಭಾಗಗಳಿಗೆ ಪೆಟ್ಟಾಗಿದೆ ಎಂದು ಆನಂದ್ ಸಿಂಗ್ ದೂರಿನಲ್ಲಿ ವಿವರಿಸಿದ್ದಾರೆ.