ಇಂದು 2ನೇ ಬಾರಿಗೆ ಮಾಧ್ಯಮಗಳಿಗೆ ಶ್ರೀಗಳ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರು, ಬೆಳಗ್ಗೆ ಇದ್ದ ಪರಿಸ್ಥಿತಿಗಿಂತಲೂ ಈಗ ಶ್ರೀಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಹೀಗಾಗಿ ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಶ್ರೀಗಳ ಆರೋಗ್ಯದ ಕುರಿತು ಬೆಂಗಳೂರಿನ ನುರಿತ ವೈದ್ಯರೊಂದಿಗೆ ಸಲಹೆ ಪಡೆದು ಚಿಕಿತ್ಸೆ ಮುಂದುವರೆಸಿದ್ದೇವೆ. ಕೆಲ ವೈದ್ಯರು ಬೆಂಗಳೂರಿನಿಂದ ಆಗಮಿಸುತ್ತಿದ್ದಾರೆ. ಅವರು ಬಂದ ಕೂಡಲೇ ಶ್ರೀಗಳಿಗೆ ಅವರು ಚಿಕಿತ್ಸೆ ನಡೆಸಲಿದ್ದಾರೆ ಎಂದು ಹೇಳಿದರು.