ಸಭೆಯಲ್ಲಿ ಮುಖ್ಯವಾಗಿ ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚಿಸಲಾಗಿದೆ. ಬಿಜೆಪಿ ಇದಾಗಲೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪರಿಸ್ಥಿತಿಯ ಭೀಕರತೆಯನ್ನು ಹಾಗೂ ಅಂಕಿ ಅಂಶಗಳನ್ನು ಕಲೆ ಹಾಕಿದೆ.ಕಂದಾಯ ಸಚಿವ ಆರ್. ವಿ. ದೇಶಪಾಂಡೆ, ಕೃಷಿ ಸಚಿವ ಶಿವಶಂಕರ್ ರೆಡ್ಡಿ, ಸಹಕಾರ ಸಚಿವ ಬಂಡೆಪ್ಪ ಕಾಂಶಂಪುರ, ಆರ್ಡಿಪಿಆರ್ ಸಚಿವ ಕೃಷ್ಣ ಬೈರೆಗೌಡ ನೇತೃತ್ವದ ನಾಲ್ಕು ತಂಡಗಳು ರು ಬರ ಪರಿಹಾರ ಕುರಿತು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ"ಅವರು ಈಗಾಗಲೇ ಬರಗಾಲಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚಿಸಲು ಪ್ರಾರಂಭಿಸಿದ್ದಾರೆ. ಜನರು ವಲಸೆ ಹೋಗುವುದನ್ನು ತಪ್ಪಿಸಲು ಕುಡಿಯುವ ನೀರು, ಮೇವು ಮತ್ತು ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಮುಂದಿನ ಶಾಸಕಾಂಗ ಅಧಿವೇಶನ ಪ್ರಾರಂಭವಾಗುವ ಮೊದಲು ತಂಡಗಳು ಎಲ್ಲಾ ಹಳ್ಳೀಗಳ ಭೇಟಿಯನ್ನು ಮುಗಿಸಿರುತ್ತದೆ.