ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ವತಿಯಿಂದ ನಗರದ ಪುರಭವನದಲ್ಲಿಂದು ಏರ್ಪಡಿಸಿದ್ದ "ರಾಷ್ಟ್ರೀಯ ಮತದಾರರ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಕ್ರಿಯೆ ಅತ್ಯಂತ ಮಹತ್ವದ್ದು. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ವಿವಿಪ್ಯಾಟ್ ವ್ಯವಸ್ಥೆ ಬಂದ ಮೇಲೆ ಚುನಾವಣೆ ಪ್ರಕ್ರಿಯೆಯ ಮೇಲೆ ಇನ್ನಷ್ಟು ವಿಶ್ವಾಸ ಮೂಡಿದೆ ಎಂದು ಹೇಳಿದರು.