ಕೇಂದ್ರ ಸರ್ಕಾರಕ್ಕೆ ಡಿಸೆಂಬರ್ 31 ರೊಳಗೆ ಹೆಸರುಗಳ ಶಿಫಾರಸು ಮಾಡಲು ಅಂತಿಮ ಗಡುವು ಆಗಿತ್ತು. ಆದರೆ ಗೃಹ ಇಲಾಖೆ ಮಾಡಿದ ನಿರ್ಲಕ್ಷ್ಯದಿಂದಾಗಿ ಯಾವೊಬ್ಬ ಪೊಲೀಸ್ ಅಧಿಕಾರಿಯೂ ಈ ಬಾರಿ ರಾಷ್ಚ್ರಪತಿ ಪದಕ ಪಡೆದಿಲ್ಲ, ಆರ್ ಪಿ ಶರ್ಮಾ ವಿರುದ್ಧ ಇಲಾಖೆಯ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಅವರ ಹೆಸರನ್ನು ಶಿಫಾರಸು ಮಾಡಿರಲಿಲ್ಲ, ಅದನ್ನು ಪ್ರಶ್ನಿಸಿ ಆರ್ ಪಿ ಶರ್ಮಾ ಮೇಲ್ಮನವಿ ಸಲ್ಲಿಸಿದ್ದಾರೆ.