ಬಳಿಕ ಹಿಂದಿಯಲ್ಲಿ ಭಾಷಣ ಆರಂಭಿಸಿದ ರಾಜ್ಯಪಾಲರು, ಕರ್ನಾಟಕ ಪ್ರಗತಿಯ ಮಾರ್ಗದಲ್ಲಿ ಇರಲಿದೆ. ಕೊಡಗು, ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪವಾಗಿತ್ತು. ಕೊಡಗಿನ ಪ್ರವಾಹದ ವೇಳೆ ಕೇಂದ್ರ, ರಾಜ್ಯಗಳ ಸಂಸ್ಥೆಗಳಿಂದ ತುರ್ತು ಕಾರ್ಯಾಚರಣೆ ನಡೆದಿದೆ. ಕೊಡಗಿನಲ್ಲಿ ಹಾನಿಗೊಳಗಾದವರಿಗೆ ಸ್ಪಂದಿಸಲಾಗಿದೆ. ಸಂಕಷ್ಟದಲ್ಲಿರುವ ಕುಟುಂಬಕ್ಕೆ ನಿಯಮಾನುಸಾರ 3,800 ರೂ. ನೀಡಲಾಗಿದೆ ಎಂದು ಹೇಳಿದರು. ಬಡವರ ಬಂಧು ಯೋಜನೆಯ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಕೊಡಲಾಗಿದೆ. ಸಹಕಾರಿ ಬ್ಯಾಂಕ್ ಗಳು, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಯೋಜನೆ ಜಾರಿ ಮಾಡಲಾಗಿದೆ. 20 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿಗಳ ಮನೆ ನಿರ್ಮಾಣ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.