ಬೆಂಗಳೂರು: ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಮೊಹಮ್ಮದ್ ಮನ್ಸೂರ್ ಖಾನ್ ಗೆ ಎನ್ಒಸಿ ನೀಡುವಂತೆ ಐಎಎಸ್ ಅಧಿಕಾರಿಯನ್ನು ಮನವೊಲಿಸಲು 4 ಕೋಟಿ ರೂ. ಪಡೆದಿದ್ದ ಆರೋಪದಡಿ ಓರ್ವ ವ್ಯಕ್ತಿಯನ್ನು ಬಂಧಿಸಿದೆ.ಮೂಲಗಳ ಪ್ರಕಾರ, ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ 600 ಕೋಟಿ ರೂ.ಗಳ ಸಾಲ ಪಡೆಯಲು ಎನ್ಒಸಿಯನ್ನು ಒದಗಿಸುವಂತೆ ಕೇಳಿದ್ದರು.ಇದಕ್ಕಾಗಿ ಐಎಎಸ್ ಅಧಿಕಾರಿಯನ್ನು ಮನವೊಲಿಸಲು ಲಂಚ ಪಡೆದಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ಎಂಜಿನಿಯರ್ ಪಿ ಡಿ ಕುಮಾರ್ ಅವರನ್ನು ಸೋಮವಾರ ಬಂಧಿಸಲಾಗಿದೆ.