ಕಳದೆ ಗುರುವಾರ ಸುಮಿತ್ರಾ ಮನೆ ಬಿಟ್ಟು ಓಡಿ ಹೋಗಿದ್ದಳು. ಇದರಿಂದ ಕೋಪಗೊಂಡ ಪತಿ ಆಕೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಪೊಲೀಸರನ್ನು ಕರೆದುಕೊಂಡು ರಮಾಬಾಯಿನಗರದಲ್ಲಿರುವ ಸಂತೋಷ್ ಕುಮಾರ್ ಮನೆಗೆ ಹೋಗಿ ಬಾಗಿಲು ಒಡೆದು ನೋಡಿದಾಗ ಸಂತೋಷ್ ಮತ್ತು ಸುಮಿತ್ರ ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೃಶ್ಯ ಕಂಡಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.