ಸೋಮವಾರ ಸಂಜೆ 6.30 ಕ್ಕೆ ಗೀತಾ ಮಲ್ಲಸಂದ್ರದಲ್ಲಿರುವ ತನ್ನ ಸಹೋದರನ ಮನೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಿರುಕುಳದ ಬಗ್ಗೆ ಆಕೆ ತನ್ನ ಸಂಬಂಧಿಕರಿಗೆ ವಿವರಿಸಿದ್ದಾಳೆ. ಬಳಿಕ ಬಚ್ಚಲು ಮನೆಯಲ್ಲಿ ಲಾಕ್ ಮಾಡಿಕೊಂಡು ಬೆಂಕಿ ಹಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಲೆ.ಘಟನೆ ಬಗೆಗೆ ಅರಿತ ನೆರೆಮನೆಯವರು ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.