ಸೋಮವಾರ ವಿಜಯ ಶಂಕರ್ ಅವರನ್ನು ಬಂಧಿಸಿದ್ದ ಎಸ್ ಐಟಿ ಪೊಲೀಸರು ಇಂದು ಸಂಜೆ 4.30ರ ಸುಮಾರಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಸುಮಾರು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದ ನ್ಯಾಯಾಧೀಶ ಶಿವಶಂಕರ್ ಬಿ ಅಮರಣ್ಣ ಅವರು, ಆರೋಪಿಯನ್ನು ಜುಲೈ 12ರ ವರೆಗೆ ಎಸ್ಐಟಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.