ಮುಂಜಾನೆ 2.20 ರ ಸುಮಾರಿಗೆ ಮಾಹಿತಿ ಪಡೆದ ನಂತರ ಅಗ್ನಿಶಾಮಕ ಮತ್ತು ತುರ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಲ್ಲು, ಮಣ್ಣುಗಳ ಅಡಿಯಲ್ಲಿ ಸಿಕ್ಕಿದ್ದ ಮೃತ ವ್ಯಕ್ತಿಯ ದೇಹವನ್ನು ಹೊರತೆಗೆದಿದ್ದು ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.ಘಟನೆಯ ನಂತರ, ಉಪಮುಖ್ಯಮಂತ್ರಿ ಜಿ ಪರಮೇಶ್ವರ, ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮತ್ತು ವಾರ್ಡ್ ಸಂಖ್ಯೆ 59 ಕಾರ್ಪೊರೇಟರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.