ಸಂತೋಷ್ ನಾಯ್ಕ, ಪತ್ನಿ ಹಾಗೂ ತಮ್ಮ ಎರಡು ಮಕ್ಕಳೊಂದಿಗೆ ನಿದ್ರಿಸುತ್ತಿದ್ದಾಗ. ನಸುಕಿನ ಜಾವ 4 ಗಂಟೆಗೆ ಮನೆಯ ಎಡಬಾಗಿಲಿನಿಂದ ಒಳನುಗ್ಗಿದ ದುಷ್ಕರ್ಮಿಗಳು ಮಗುವನ್ನು ಅಪಹರಿಸಿಕೊಂಡು ಹೋಗುತ್ತಿದ್ದಾಗ, ತಾಯಿ ಎಚ್ಚರಗೊಂಡು, ದುಷ್ಕರ್ಮಿಗಳನ್ನು ಹಿಂಬಾಲಿಸುತ್ತಾ ಬೊಬ್ಬೆ ಹಾಕಿದ್ದಾರೆ. ಆಗ ಅಪಹರಣಕಾರರು ಮಗುವಿನ ಸಮೇತ ತುಂಬಿ ಹರಿಯುತ್ತಿದ್ದ ಕುಬ್ಜಾ ನದಿಗೆ ಹಾರಿದ್ದಾರೆ.ಬಳಿಕ ಈಜುತ್ತಾ ನದಿ ದಾಟಿ ಹೊಸಂಗಡಿಯತ್ತ ಪರಾರಿಯಾಗಿದ್ದಾರೆ.