ಇನ್ನು ಸರ್ಕಾರಕ್ಕೆ ಬಂಡಾಯದ ಬಿಸಿ ಜೋರಾಗಿಯೇ ತಟ್ಟಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಟ್ಟು 16 ಶಾಸಕರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಹೀಗಾಗಿ, ತಾವು ರಾಜೀನಾಮೆ ನೀಡಿದ್ದರೂ, ರಾಜಿನಾಮೆ ಅಂಗೀಕಾರಗೊಳ್ಳದ ಕಾರಣ, ಅತೃಪ್ತ ಶಾಸಕರು ಗೊಂದಲಕ್ಕೆ ಸಿಲುಕಿದ್ದಾರೆ. ರಾಜಿನಾಮೆ ನೀಡಿರುವುದರಿಂದ ಅಧಿವೇಶನದ ಕಲಾಪದಿಂದ ದೂರ ಉಳಿಯಬೇಕೊ ಅಥವಾ ವಿಪ್ ಉಲ್ಲಂಘನೆಯ ಕ್ರಮಕ್ಕೆ ಹೆದರಿ ಸದನಕ್ಕೆ ಆಗಮಿಸಬೇಕೊ ಎಂಬ ಗೊಂದಲ ಉಂಟಾಗಿದೆ.