ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಯಲ್ಲಾಪುರ, ಭಟ್ಕಳ ಮತ್ತಿತರ ತಾಲೂಕುಗಳಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ಭೂ ಕುಸಿತವಾಗಿದ್ದು, ಹೆದ್ದಾರಿ ಬಂದ್ ಆಗಿದೆ.ಪ್ರವಾಹ ಪರಿಸ್ಥಿತಿ ಉಂಟಾಗಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ.ಅಂಕೋಲಾ ತಾಲೂಕಿನ ಜಲಾವೃತಗೊಂಡ ಗ್ರಾಮಗಳಿಂದ ಜನರನ್ನು ಬೇರೆಡೆಗೆ ಜಿಲ್ಲಾಡಳಿತ ಸ್ಥಳಾಂತರಿಸುತ್ತಿದೆ.