ಐಎಂಎ ಪ್ರಕರಣ: ಶಿವಾಜಿನಗರ ಶಾಸಕ ರೋಷನ್ ಬೇಗ್ ಎಸ್ಐಟಿ ವಶಕ್ಕೆ

ಮುಂಬೈಗೆ ಪಲಾಯನವಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದಾರೆ...
ರೋಷನ್ ಬೇಗ್
ರೋಷನ್ ಬೇಗ್
ಬೆಂಗಳೂರು: ಮುಂಬೈಗೆ ಪಲಾಯನವಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.
ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ರೋಷನ್ ಬೇಗ್ ಗೆ ನೋಟೀಸ್ ನೀಡಿದ್ದರು. 
ವಿಚಾರಣೆಗೆ ರೋಷನ್ ಬೇಗ್ ಹಾಜರಾಗದೆ ತಮ್ಮ ಆಪ್ತನ ಮೂಲಕ ಜುಲೈ 25ರಂದು ವಿಚಾರಣೆಗೆ ಹಾಜರಾಗುವುದಾಗಿ ಎಸ್ಐಟಿ ಅಧಿಕಾರಿಗಳಿಗೆ ತಿಳಿಸಿದ್ದರು. 
ಆದರೆ ಇಂದು ರಾತ್ರಿ ರೋಷನ್ ಬೇಗ್ ಮುಂಬೈಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿ ಗಿರೀಶ್ ಅವರು ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಬೇಗ್ ರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com