ಇಷ್ಟರವರೆಗೆ ಈ ದೇವಸ್ಥಾನದಲ್ಲಿ ಸರ್ಕಾರಿ ನೌಕರರು ತಮ್ಮ ವರ್ಗಾವಣೆ, ಬಡ್ತಿ, ವೈಯಕ್ತಿಕ ಸಮಸ್ಯೆ ಹೇಳಿಕೊಂಡು ವಿಶೇಷ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಬರುತ್ತಿದ್ದರೆ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಬೆಂಬಲಿಗರು ರಾಜಕೀಯ ಬಿಕ್ಕಟ್ಟಿನ ನಂತರ ನಾಡಿದ್ದು ವಿಶ್ವಾಸಮತ ಯಾಚನೆ ಇರುವುದರಿಂದ ದೇವಸ್ಥಾನಕ್ಕೆ ಎಡತಾಕುತ್ತಿದ್ದಾರೆ. ಈ ದೇವಾಲಯ ಇರುವುದು ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯದಲ್ಲಿ.