ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು

ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿ, ಮೂರು ಮಹಿಳೆಯರು ಸೇರಿ 5 ಸಾವು
ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-4ರ ಕುಂಚಿಗನಾಳು ಗ್ರಾಮದಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಮೃತಪಟ್ಟು ಇನ್ನೂ ಮೂವರುಗಂಭೀರ ಗಾಯಗೊಂಡಿದ್ದಾರೆ.
ಕಾರಿನಲ್ಲಿ  ಅಶೋಕ್, ಪ್ರವಿತಾ, ಮಂಜುಳಾ, ಶೋಭಾ, ಸುಕನ್ಯಾ, ಶ್ರೇಷ್ಠ  ಸೇರಿ ಒಟ್ಟು ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲಾ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸಿಗಳಾಗಿದ್ದು ಬಾಗಲಕೋಟೆ ಜಿಲ್ಲೆ ಬಾದಾಮಿ ಬನಶಂಕರಿ ದೇವಾಲಯಕ್ಕಾಗಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಸೇರಿದ್ದು ಎಲ್ಲಾ ಗಾಯಾಳುಗಳನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ಖಾರು ಸಂಪೂರ್ಣ ಜಖಂ ಆಗಿದೆ.ಸ್ಥಳಕ್ಕೆ ಚಿತ್ರದುರ್ಗ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com