ರಾಯಚೂರು ನವೋದಯ ಇಂಜಿನಿಯರಿಂಗ್ ಕಾಲೇಜಿನ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಮಧು ಪತ್ತಾರ್ ಪ್ರಿಲ್ 13ಕ್ಕೆ ಮನೆ ಬಿಟ್ಟು ಪರೀಕ್ಷೆಗಾಗಿ ತೆರದವಳು ನಾಪತ್ತೆಯಾಗಿದ್ದಳು. ಅದಾಗಿ ಮೂರು ದಿನಗಳ ನಂತರ ಏಪ್ರಿಲ್ 16ರಂದು ಕಾಲೇಜಿನಿಂದ ನಾಲ್ಕು ಕಿಮೀ ದೂರದ ನಿರ್ಜನ ಪ್ರದೇಶದಲ್ಲಿ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಕರಣದಲ್ಲಿ ಮುಖ್ಯ ಆರೋಪಿ ಸುದರ್ಶನ್ ಯಾದವ್ ನನ್ನು ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಹೆಚ್ಚಿನ ವಿವರಗಳು ಲಭ್ಯವಾಗಿದೆ. ಘಟನೆ ಕುರಿತಂತೆ ರಾಜ್ಯಾದ್ಯಂತ ವ್ಯಾಪಕ ಚರ್ಚೆ, ಪ್ರತಿಭಟನೆಗಳು ನಡೆದ ಕಾರಣ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು.