ಕರ್ನಾಟಕದ ಪೊಲೀಸ್ ಅಧಿಕಾರಿಗಳಲ್ಲಿ ರೆಡ್ಡಿ ಎರಡನೇ ಅತಿ ಹಿರಿಯ ಅಧಿಕಾರಿಯಾಗಿದ್ದು 1984ನೇ ಬ್ಯಾಚ್ ನವರು. ನೀಲಮಣಿ ಎನ್ ರಾಜು ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿಯಾಗಿ 2017ರ ನವೆಂಬರ್ ನಲ್ಲಿ ನೇಮಕಾತಿ ಮಾಡುವಾಗ ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಅನುಸರಿಸಿಲ್ಲ, ಹುದ್ದೆಯಲ್ಲಿ ಹಿರಿತನದ ಸಾಲಿನಲ್ಲಿದ್ದ ಯುಪಿಎಸ್ ಸಿಯ ಹಿರಿಯ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಸಹ ಕಳುಹಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ನೀಲಮಣಿ ರಾಜು 1983ನೇ ಸಾಲಿನ ಐಪಿಎಸ್ ಅಧಿಕಾರಿ.